ಬುಧವಾರ, ಜುಲೈ 9, 2014

ಭಾರತದ ಪ್ರಥಮ “72 ಜೀನಾಲಯ”

ಭಾರತದ ಪ್ರಥಮ  “72 ಜೀನಾಲಯ”
72  ಜೀನಾಲಯದ ಇದರ ಸಂಪೂರ್ಣ ನೋಟ
72  ಜೀನಾಲಯದ ಇದರ ಸಂಪೂರ್ಣ ನೋಟ
ರಾಜಸ್ಥಾನ ರಾಜ್ಯದ  ಜಾಲೋರ ಜಿಲ್ಲೆ ಬೀನಮಾಲ್ ಬ್ಲಾಕನಲ್ಲಿ  (ತಾಲ್ಲೂಕು) ಲಕ್ಷ್ಮೀ ವಲ್ಲಭ 72 ಜೀನಾಲಯ ಇರುವುದು. ಇದು ಭಾರತ ದೇಶದ ಪ್ರಥಮ 72 ಜೀನಾಲಯವಾಗಿರುವುದು. ಬ್ಲಾಕನ ಕೇಂದ್ರ ಸ್ಥಳದಲ್ಲಿಯೇ ಮಂದಿರ ಇರುವದು. ಲುಕಡ ಪರಿವಾರದವರು ಕಟ್ಟಿಸಿರುವ ಜೀನಾಲಯದಲ್ಲಿ ಜೈನ ಧರ್ಮದ 72 ತೀರ್ಥಂಕರರ ವಿಗ್ರಹಗಳು ಇರುವುದು ವಿಶೇಷವಾಗಿದೆ. ಜೈನ ಧರ್ಮದ ಅನುಯಾಯಿಗಳಿಗೆ ತಮ್ಮ ಎಲ್ಲಾ ತೀರ್ಥಂಕರರನ್ನು ಒಂದೇ ಮಂದಿರದಲ್ಲಿ ನೋಡುವ ಸೌಭಾಗ್ಯವನ್ನು ಜೀನಾಲಯ ಒದಗಿಸಿರುವುದು. ತನ್ನದೇ ಆದ ವಿಶಿಷ್ಠ ಅತ್ಯಂತ ಸುಂದರವಾದ ಶಿಲ್ಪ ಕಲೆಗಳಿಂದ ನಿಮೀ೯ತವಾದ ಜೈನ ದೇವಾಲಯ ಆಧುನಿಕ ಶಿಲ್ಪಕಲೆಯ ಪ್ರತಿಬಿಂಬವಾಗಿರುವುದು. ಬಿಳಿಯಾದ ಮಾರ್ಬಲಗಳಿಂದ ರಚಿತವಾದ ಮಂದಿರ ರಾಜಸ್ಥಾನದ ಒಂದು ಹೆಮ್ಮೆಯಾಗಿರುವುದುಜಾಲೋರ-ಬೀನಮಾಲ ಮುಖ್ಯ ರಸ್ತೆಯ ಬದಿಯಲ್ಲಿಯೇ ಇರುವ ಇದು ದಾರಿಯಲ್ಲಿ ಸಾಗುವ ಎಲ್ಲರನ್ನು ಕೈ ಬೀಸಿ ಕರೆಯುತ್ತಿರುವುದು.
ಜೀನಾಲಯದ ಎರಡು ಬದಿಯ ನೋಟಗಳು
ಜೀನಾಲಯದ  ಬದಿಯ ನೋಟಗಳು
72 ಜೀನಾಲಯದ ಮುಖ್ಯ ದ್ವಾರದ ಒಂದು ನೋಟ
72 ಜೀನಾಲಯದ ಮುಖ್ಯ ದ್ವಾರದ ಒಂದು ನೋಟ
ವಿಶಾಲವಾದ ದೇವಾಲಯದ ಹೊರಗಿನ ಆವರಣ, ಜೀನಾಲಯದಲ್ಲಿ ಇರುವ ಪಾರಿವಾಳಗಳು, ಹಸಿರು ಹುಲ್ಲುಗಳು, ಸುಂದರ ಹೂವುಗಳು ಬೇವಿನ ಮರದ ಕೆಳಗಿನ ತಂಪಾದ ಗಾಳಿ ರಾಜಸ್ಥಾನದ ಊರಿ ಬಿಸಿಲಿನಲ್ಲಿಯೂ ನಾವು ಬೇರೆ ಯಾವುದೋ ಲೋಕದಲ್ಲಿರು ಅನುಭವವನ್ನು ನೀಡುವುದು.
ಸುಮಾರು 140 ಕೊಠಡಿಗಳ ಧರ್ಮಶಾಲೆ, ಭೋಜನಶಾಲೆ ಎಲ್ಲವೂ ಮಂದಿರದ ಆವರಣದಲ್ಲಿಯೇ ಇದ್ದು ಬರುವ ಪ್ರವಾಸಿಗರಿಗೆ ಸೇವೆಯನ್ನು ಒದಗಿಸುತ್ತಿರುವುದು.
72 ಜೀನಾಲಯದ ಹೊರ ಆವರಣದ ಒಂದು ನೋಟ
ಮುಖ್ಯ ದ್ವಾರದ ಸೌಂದರ್ಯ ಹೆಚ್ಚಿಸಿರುವ ಪಾರಿವಾಳಗಳು
ರಾಜಸ್ಥಾನದ ಪ್ರವಾಸಕ್ಕೆಂದು ನೀವು ಬಂದರೆ  ತಪ್ಪದೇ ದೇವಾಲಯದ ಸೌಂದರ್ಯವನ್ನು ಸವಿದೇ ಹೋಗಿರಿ. 72 ತೀರ್ಥಂಕರರನ್ನು ತಾವು ಸಹಾ ದರ್ಶನ ಮಾಡಿರಿ.









ಸೋಮವಾರ, ಜುಲೈ 7, 2014

ವಿಶ್ವದ ಮೊದಲ ಹಡಗು ಮಂದಿರ

ವಿಶ್ವದ ಮೊದಲ ಹಡಗು ಮಂದಿರ
ಹಡಗು ಮಂದಿರದ ರಾತ್ರಿಯ ಒಂದು ನೋಟ
ರಾಜಸ್ಥಾನ ರಾಜ್ಯದ ಜಾಲೋರ ಜಿಲ್ಲೆಯಲ್ಲಿ ಬರುವ ಜಿಲ್ಲೆಯ ಸಾಯಲಾ ಬ್ಲಾಕನ ಮಂಡವಾಲಾ ಗ್ರಾಮದಲ್ಲಿ ವಿಶ್ವದ ಪ್ರಥಮ ಹಡಗು ಮಂದಿರವಿರುವುದು. ಜಾಲೋರದಿಂದ 20-22 ಕಿ. ಮೀ ದೂರವಿರುವ ಜೈನ ಮಂದಿರವನ್ನು  ಜಹಾಜ್ ಮಂದಿರವೆಂದೆ ಕರೆಯುವರು. ಜಹಾಜ್ ಎಂದರೆ ಹಡಗು ಎಂದರ್ಥ.
ಹಡಗು ಮಂದಿರದ ಒಂದು ನೋಟ್
 ಮಂದಿರದಲ್ಲಿ ಇರುವ  ಪ್ರತಿಮೆ
ಶ್ರೀ ಕಾಂತಿಸಾಗರಸೂರಿ ಸ್ಮಾರಕ ಟ್ರಸ್ಟನವರು ನಿಮಿ೯ಸಿರುವ ಮಂದಿರ ತನ್ನದೇ ಆದ ವಿಶೇಷತೆಯನ್ನು ಹಂದಿರುವುದುಕ್ರಿ. 1992 ರಲ್ಲಿ ಕಟ್ಟಲ್ಪಟ್ಟ   ಜೈನ ಮಂದಿರ ಮಾರ್ಬಲನಿಂದ ನಿಮಿ೯ತವಾಗಿರುವುದು. ಮಂದಿರದ ಒಳಗೆ ಬಳಕೆ ಮಾಡಿರುವ ಎಲ್ಲಾ ಸಾಮಗ್ರಿಗಳು ತಳ ತಳ ಹೊಳುಯುವಂತಹ ಸಾಮಗ್ರಿಯಾಗಿದೆ. ಸಂಪೂರ್ಣ ಮಂದಿರ ಶ್ರೀಮಂತಿಕೆಯಿಂದ ತುಂಬಿ ತಳ ತಳಸಿರುವುದು
ಪುರಾಣ ಕಾಲದ ಮಂದಿರಗಳನ್ನು ನೋಡುತ್ತಾ ಅವುಗಳನ್ನು ಣಿ೯ಸುತ್ತಾ ಇತಿಹಾಸ ಕೆದಕುತ್ತಾ ಇರುವ ನಾವು ಆಧುನಿಕ ಯುಗದಲ್ಲಿ ಹೆಚ್ಚು ವೈಭವೋಪ್ರೇರಿತ ಮಂದಿರಗಳನ್ನು ನಿಮಿ೯ಸಿರುವುದು ಕಡಿಮೆ ಇರುವುದುಇಂತಹ ಸಂದರ್ಭದಲ್ಲಿ ಜೈನ ಸಮುದಾಯವರು ನಿಮಿ೯ಸಿರುವ ಹಡಗು ಮಂದಿರ ಎಲ್ಲರ ಆಕರ್ಷಣೆಯ ಬಿಂದುವಾಗಿರುವುದುಮುಂದೆ ಇದು ಜೈನ ಧರ್ಮದ ಇತಿಹಾಸ ಆಗುವುದರಲ್ಲಿ ಯಾವ ಸಂದೇಹವು ಇಲ್ಲ.
ದೇವಾಲಯದ ಹೆಸರೆ ಹೇಳುವಂತೆ ಇದು ಹಡಗು ಮಂದಿರ. ದೂರದಿಂದ ನೋಡಿದಾಗ ದೊಡ್ಡದಾದ ಹಡಗು ಬಂದರಿನಲ್ಲಿ ಬಂದು ನಿಂತಂತೆ ಕಾಣುವುದು. ರಾತ್ರಿಯಲ್ಲಿ ನೋಡಿದಾಗ ಇದು ದೇವಾಲಯ ಎಂದು ಹೇಳಲು ಬಾಯಿ ಬರದು ಬದಲಾಗಿ ಸಮುದ್ರದಲ್ಲಿ ನಿಂತಿರುವ ಹಡಗಾಗಿರುವುದು.
ಹಡಗು ಮಂದಿರದ ಒಳಗೆ ತಳ ತಳಿಸುವ ಮಾಬ್ರಲ್, ವಿವಿಧ ಕಲ್ಲುಗಳು, ಅಗತ್ಯಕ್ಕೆ ತಕ್ಕ ಲೈಟ್ ವ್ಯವಸ್ಥೆ ಎಲ್ಲವು ಮಂದಿರದ ಸೌಂಧರ್ಯವನ್ನು ಇಮ್ಮಡಿಗೊಳಿಸಿರುವುದು.
ರಾಜಸ್ಥಾನದ ಪ್ರಮಾಸಕ್ಕಾಗಿ ತಾವುಗಳು ಬಂದರೆ ಮಂದಿರವು ಸಹಾ ನಿಮ್ಮ ಯೋಜನೆಯಲ್ಲಿರಲಿ. ಇಲ್ಲಿ ತಮಗೆ ಬೇಕಾದ ವಸತಿ ಮತ್ತು ಊಟದ ವ್ಯವಸ್ಥೆಯೂ ಇರುವುದು.

                                                                                                    ವಿವೇಕ ಬೆಟ್ಕುಳಿ


ಮಂದಿರದ ಒಳಗಿನ ತಳ ತಳಿಸುವ ಕಂಬಗಳ ಸಾಲು
ಮಂದಿರದ ಒಳಗಿನ ತಳ ತಳಿಸುವ ಕಂಬಗಳ ಸಾಲು


ಇಲ್ಲಿ ಕಾಣಿಕೆ ಹಾಕುವುದು ಹಡಗಿನಲ್ಲಿಯೇ ಆಗಿರುವುದು.

- ಮಂದಿರದ ಮೇಲ್ಭಾಗದ ಒಂದು ನೋಟ್

ಗುರುವಾರ, ಜುಲೈ 3, 2014

ಕಥೆ: ಮಾನಸ ಹೆಗಡೆ

ಕಥೆ: ಮಾನಸ ಹೆಗಡೆ: ಸಂಪುಟ ೧ ಸಂಚಿಕೆ ೨   ಕದ್ದ ಸೊತ್ತು  (ಮಕ್ಕಳ ಕತೆ)                     ದಾಮಣ್ಣನಿಗೆ ಎಲ್ಲ ವಸ್ತುಗಳ ಮೇಲೂ ಅತಿಯಾದ ಆಸೆ. ಆದರೆ ದುಡಿಯಲು ಮಾತ್ರ ಶುದ್ಧ...

ಮಂಗಳವಾರ, ಜುಲೈ 1, 2014

ರಾಜಸ್ಥಾನದಲ್ಲಿ ಪ್ರಾರಂಭವಾಯಿತು ಶಾಲೆಗಳು......

ರಾಜಸ್ಥಾನದಲ್ಲಿ ಪ್ರಾರಂಭವಾಯಿತು ಶಾಲೆಗಳು......
ಮಕ್ಕಳ ಸ್ವಾಗತಿಸುತ್ತಿರುವ ಜನಪ್ರತಿಗಳು, ಶಾಲಾ ಸಮಿತಿ ಮತ್ತು ಶಿಕ್ಷಕರು
ಮಕ್ಕಳ ಸ್ವಾಗತಿಸುತ್ತಿರುವ ಜನಪ್ರತಿಗಳು, ಶಾಲಾ ಸಮಿತಿ ಮತ್ತು ಶಿಕ್ಷಕರು
ರಾಜಸ್ಥಾನದಲ್ಲಿ ಇಂದಿನಿಂದ ಶಾಲೆಗಳು ಪ್ರಾರಂಭವಾಗಿರುವುದು. ಸುಡುವ ಬಿಸಿಲಿನಲ್ಲಿ ಕೆಲವು ಮಕ್ಕಳು ಪ್ರಥಮ ದಿನವೇ ಶಾಲೆಗೆ ಬಂದಿದ್ದರು. ಮಕ್ಕಳನ್ನು ಸ್ವಾಗತ ಮಾಡಿ ಬರಮಾಡಿಕೊಳ್ಳಲಾಗುತ್ತಿದೆ. ಜೈಪುರ ಜಿಲ್ಲೆಯಲ್ಲಿ ಇಂದು ನಡೆದ ಶಾಲಾ ಪ್ರಾರಂಭೋತ್ಸವದ ಒಂದರಲ್ಲಿ ನಾನು ಸಹಾ ಪಾಲ್ಗೊಂಡಿದ್ದೆ. ಮಕ್ಕಳ ಹಣೆಗೆ ಕುಂಕುಮ ಇಟ್ಟು ಹೂವಿನ ಮಾಲೆಯನ್ನು ಹಾಕಿ ನೋಟ್ ಬುಕ್ ಮತ್ತು ಪೆನ್ನನ್ನು ನೀಡಿ ಮಕ್ಕಳನ್ನು ಸ್ವಾಗತಿಸಲಾಯಿತು. ಮಾಲೆ ಧರಿಸಿ ಒಂದನೆ ತರಗತಿಗೆ ಬಂದ ಮಕ್ಕಳು ಮತ್ತು ಹಿರಿಯಮಕ್ಕಳೆಲ್ಲರು ಸೇರಿ ಪ್ರಭಾತ ಪೇರಿ ನಡೆಸಿ ಮಕ್ಕಳನ್ನು ದಾಖಲಿಸಲು ಕರೆ ನೀಡಿದರು. ಅಧಿಕಾರಿಗಳು, ಜನಪ್ರತಿನಿಧಿಗಳು, ಶಾಲಾ ಸಮಿತಿಯವರು ಮತ್ತು ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಶಾಲೆಯಲ್ಲಿ ಸಿಗುವ ಬಟ್ಟೆ, ಪಠ್ಯ ಪುಸ್ತಕ,ಬಿಸಿಯೂಟ, ಇಂದು ಶಿಕ್ಷಕರು ಮಕ್ಕಳಿಗೆ ತೋರಿಸುತ್ತಿದ್ದ ಪ್ರೀತಿ ಮತ್ತು ಕೊಟ್ಟ ಸಿಹಿ ತಿಂಡಿ ಇವನ್ನು ನೋಡುತ್ತಾ ನನಗೂ ಅನಿಸಿತು ನಾನು ಯಾಕೆ ದೊಡ್ಡವನಾದೆ?,
ಮಕ್ಕಳ, ಜನಪ್ರತಿನಿಧಿಗಳ ಪ್ರಭಾತ ಪೇರಿಯ ಒಂದು ನೋಟ

ಮಕ್ಕಳ, ಜನಪ್ರತಿನಿಧಿಗಳ ಪ್ರಭಾತ ಪೇರಿಯ ಒಂದು ನೋಟ
 ದುಖ:ವು ಆಯಿತು ನಾನು ಓದುವಾಗ ಇಂತಹ ಸೌಲಭ್ಯ ಇಲ್ಲದೇ ಇದ್ದರು ಕಾ೯ರಿ ಶಾಲೆಯ ಬಗ್ಗೆ ಶಿಕ್ಷಕರ ಎಲ್ಲರ ವಿಶ್ವಾಸ ಇತ್ತು. ಇಂದು ವಿಶ್ವಾಸದ ಕೊರತೆ ಎದ್ದು ಕಾಣುತ್ತಿತ್ತು.
ಸಭೆಯ ಒಂದು ನೋಟ
ನಂತರ ನಡೆದ ಸಭೆಯಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು ಎಲ್ಲರು ಜನರಲ್ಲಿ ಸಕಾ೯ರಿ ಶಾಲೆಯ ಬಗ್ಗೆ ವಿಶ್ವಾಸ ತುಂಬುವ ಕಾರ್ಯವನ್ನು ಶಿಕ್ಷಕರೇ ಪ್ರಾರಂಭಿಸಬೇಕಾಗಿದೆ. ಇಲ್ಲವಾದರೇ ಮುಂದಿನ ದಿನಗಳಲ್ಲಿ ಸಕಾ೯ರಿ ಶಾಲೆಗಳಲ್ಲಿ ಮಕ್ಕಳೆ ಇಲ್ಲದೇ ಹೋಗುವ ಸ್ಥಿತಿ ಬರಬಹುದು ಎಂಬ ಆತಂಕ ವ್ಯಕ್ತಪಡಿಸಿದರು. ಮುಂದಿನ ದಿನದಲ್ಲಿ ಎಲ್ಲರೂ ಸೇರಿ ಸಕಾ೯ರಿ ಶಾಲೆಯಲ್ಲಿ ಮಕ್ಕಳ ಸಂಖ್ಯೆಯನ್ನು ಹೆಚ್ಚಿಸುವ ತೀಮಾ೯ ಮಾಡಿದರು.

ಗ್ರಾಮ ಪಂಚಾಯಿತಿ ಮತ್ತು ತಾಲ್ಲೂಕಾ(ಬ್ಲಾಕ್) ಪಂಚಾಯಿತಿಯ ಶಿಕ್ಷಣ ಸ್ಥಾಯಿ ಸಮಿತಿಗಳು ಸಕಾ೯ರಿ ಶಾಲೆಯಲ್ಲಿ ಮಕ್ಕಳ ದಾಖಲಾತಿಗಾಗಿ ಪ್ರಚಾರ ಸಾಮಗ್ರಿಯನ್ನು  ತಯಾರಿಸಿ ಎಲ್ಲಾ ಕಡೆ ಹಂಚುತ್ತಿರುವುದು ಇಂದು ಕಂಡು ಬಂತು.
ಮಕ್ಕಳ ಪ್ರಭಾತ ಪೇರಿಯ ಒಂದು ನೋಟ




ಸಮಾನತೆಯ ಹೆಸರಿನಲ್ಲಿ ಮಹಿಳೆ ಪುರುಷನಾಗುವುದು ಸೂಕ್ತವೇ?

  ಸ್ವಾತಂತ್ರ್ಯ ಸಿಕ್ಕು 75 ವರ್ಷ ಕಳೆದರೂ ಮಹಿಳೆ ಸಮಾನತೆ ಎಂಬುದು ಬಂದಿಲ್ಲ . ಇಂದಿಗೂ ದೇಶದಲ್ಲಿ ಅರ್ಧದಷ್ಟು ಜನಸಂಖ್ಯೆ ಇದ್ದರೂ ಮಹಿಳಾ ಜನಪ್ರತಿನಿಧಿಗಳ...